ರಾಜ್ಯದ 47 ಜನರಲ್ಲಿ ಶಂಕಿತ ಕೊರೊನಾ ವೈರಸ್: ಆರೋಗ್ಯ ಸಚಿವ ಶ್ರೀರಾಮುಲು

Update: 2020-02-05 17:22 GMT
Photo: facebook/B Sriramulu

ತುಮಕೂರು, ಫೆ.5: ರಾಜ್ಯದಲ್ಲಿ 47 ಮಂದಿಯಲ್ಲಿ ಶಂಕಿತ ಕೊರೊನಾ ವೈರಸ್ ಪತ್ತೆಯಾಗಿದ್ದು, ತುಮಕೂರು ನಗರದಲ್ಲಿಯೂ ಒಂದು ಪ್ರಕರಣ ಪತ್ತೆಯಾಗಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೊನಾ ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿ ವರಿಷ್ಠ ಯಡಿಯೂರಪ್ಪ ಅವರು, ಅಮಿತ್‍ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರೊಂದಿಗೆ ಚರ್ಚಿಸಿ ವಿಸ್ತರಣೆ ಮಾಡುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.

ಪಕ್ಷಕ್ಕೆ ಮುಜುಗರವನ್ನುಂಟು ಮಾಡುವಂತೆ ಡಿಸಿಎಂ ಹುದ್ದೆಯನ್ನು ಕೇಳುವುದಿಲ್ಲ. ವರಿಷ್ಠರು ತೆಗೆದುಕೊಂಡಿರುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಶ್ರೀರಾಮುಲು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News