ನಾಯಿಗಳು ಕೂಡಾ ಸಿಎಂ ಕಾಲಿಗೆ ನಮಸ್ಕರಿಸುತ್ತಿರಲಿಲ್ಲ: ನೂತನ ಸಚಿವರ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ

Update: 2020-02-06 13:39 GMT

ಬೆಂಗಳೂರು, ಫೆ.6: ನಾಯಿಗಳು ಪ್ರಮಾಣ ವಚನ ಸ್ವೀಕಾರ ಮಾಡಿದ್ದರೂ, ಮುಖ್ಯಮಂತ್ರಿಗಳ ಕಾಲಿಗೆ ನಮಸ್ಕರಿಸುತ್ತಿರಲಿಲ್ಲ ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಗರದ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲಿಗೆ ಮುಗಿದು, ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಅಲ್ಲದೆ, ಒಂದು ವೇಳೆ ನಾಯಿಗಳು ಪ್ರಮಾಣ ವಚನ ಸ್ವೀಕರಿಸಿದ್ದರೂ, ಮುಖ್ಯಮಂತ್ರಿಗಳ ಕಾಲಿಗೆ ನಮಸ್ಕರಿಸುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ದೇವರು, ತಂದೆ, ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಬದಲು ಬಿ.ಎಸ್.ಯಡಿಯೂರಪ್ಪ ಅವರ ಹೆಸರಿನಲ್ಲಿಯೇ ಪ್ರಮಾಣಿಕರಿಸಬೇಕಿತ್ತು. ಅಲ್ಲದೆ, ಇಂತಹ ಮಂತ್ರಿಮಂಡಲ ಎಂದೂ ಕಂಡಿಲ್ಲ ಎಂದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧ ಪ್ರವೇಶಕ್ಕೆ ಅಡ್ಡಿಪಡಿಸಿ, ಬ್ಯಾರಿಕೇಡ್ ಹಾಕಿರುವುದು ಖಂಡನೀಯ ಎಂದು ವಾಟಾಳ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News