ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ

Update: 2020-02-08 12:10 GMT

ಬೆಂಗಳೂರು, ಫೆ. 8: ಸಂಪುಟಕ್ಕೆ ಸೇರ್ಪಡೆಯಾದ ಹತ್ತು ಮಂದಿ ನೂತನ ಸಚಿವರಿಗೆ ಸೋಮವಾರ (ಫೆ.10) ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆ ನೀಡಬೇಕೆಂದು ಪಟ್ಟಿ ಸಿದ್ಧವಾಗಿದೆ. ಎರಡನೆ ಶನಿವಾರ ರಜೆಯಿದ್ದದ್ದರಿಂದ ಪಟ್ಟಿ ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ನಿಶ್ಚಿತವಾಗಿಯೂ ಖಾತೆ ಹಂಚಿಕೆಯಾಗಲಿದೆ ಎಂದರು.

ದಿಲ್ಲಿಗೆ ಹೋಗುವುದಿಲ್ಲ: ಸಚಿವರಿಗೆ ಯಾವ ಖಾತೆ ನೀಡಬೇಕೆಂಬ ಬಗ್ಗೆ ವರಿಷ್ಠರ ಜತೆ ಚರ್ಚಿಸಿಲು ಹೊಸದಿಲ್ಲಿಗೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News