ಭಟ್ಕಳ ಖಾಝಿ ಮೌಲಾನ ಮುಹಮ್ಮದ್ ಇಕ್ಬಾಲ್ ಮೇಲೆ ಬಂದೂಕಿನಿಂದ ದಾಳಿಗೆ ಯತ್ನ: ದೂರು ದಾಖಲು

Update: 2020-02-08 13:42 GMT

ಭಟ್ಕಳ: ಇಲ್ಲಿನ ಮದಿನಾ ಕಾಲನಿಯಲ್ಲಿರುವ ಭಟ್ಕಳದ ಖ್ಯಾತ ವಿದ್ವಾಂಸ ಹಾಗೂ ಮರ್ಕಝಿ ಜಮಾತುಲ್ ಮುಸ್ಲಿಮೀನ್ ಇದರ ಪ್ರಧಾನ ಖಾಝಿ ಮೌಲಾನ ಮುಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ದುಷ್ಕರ್ಮಿಯೋರ್ವ ಬಂದೂಕಿನಿಂದ ದಾಳಿ ಮಾಡಲು ಶನಿವಾರ ಬೆಳಗ್ಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮಂದಿ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು. ಮೌಲಾನರ ಮೇಲೆ ಹಲ್ಲೆ ಯತ್ನ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಕೂಡಲೇ ತನಿಖೆ ನಡೆಸಿ ದುಷ್ಕರ್ಮಿಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇವರಿಗೆ  ಶಿರೂರು ಬಳಿ ಅವರ ಕಾರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಘಟನೆ ನಡೆದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News