ಬಿಎಸ್‌ವೈ ಅವರದ್ದು ರಿಚಾರ್ಜ್ ಸರಕಾರ: ಮಾಜಿ ಸಚಿವ ಎಚ್.ಆಂಜನೇಯ

Update: 2020-02-08 17:04 GMT

ದಾವಣಗೆರೆ, ಫೆ.8: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು, ರಿಚಾರ್ಜ್ ಸರಕಾರ ಇದ್ದಂತೆ, ಶಾಸಕರನ್ನು ಖರೀದಿಸಿ ಮಂತ್ರಿಮಂಡಲ ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಟೀಕಿಸಿದ್ದಾರೆ.

ಇಲ್ಲಿನ ರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರಕ್ಕೆ ಆಯಸ್ಸು ಇದೆ. ಏಕೆಂದರೆ, ಶಾಸಕರನ್ನು ಖರೀದಿಸಿ ರಚಿಸಿರುವ ಸರಕಾರ. ಒಂದು ವೇಳೆ, ಸರಕಾರಕ್ಕೆ ಅಪತ್ತು ಬಂದರೂ, ಮತ್ತಷ್ಟು ಮಂದಿಯನ್ನು ಖರೀದಿಸಿ ಮಂತ್ರಿಗಳನ್ನು ಮಾಡುತ್ತಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಸಂಬದ್ಧವಾಗಿ ಮಾತನಾಡಿದರೆ ಬ್ರೇಕಿಂಗ್ ನ್ಯೂಸ್ ಬರುತ್ತದೆ ಎನ್ನುವ ಕಾರಣಕ್ಕೆ ಕೆಲವರು ಅವರನ್ನು ಸುಖಾಸುಮ್ಮನೆ ಟೀಕಿಸುತ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಎಸ್ಸೈ ಸರಕಾರದಲ್ಲಿ ಸಾಮಾಜಿಕ ನ್ಯಾಯವೇ ಇಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಅಸಮತೋಲನದ ಬಗ್ಗೆ ಇನ್ನೇನು ಮಾತನಾಡಲು ಆಗುತ್ತೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ನಿರ್ಧಾರ ಮಾಡಲಿದ್ದಾರೆ. ನನ್ನನ್ನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ಅಭಿಪ್ರಾಯ ಪಡೆಯಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News