ರಾಜ್ಯ ರಾಜಕಾರಣದಲ್ಲಿ ಕುಮಾರಸ್ವಾಮಿ ಮತ್ತೊಮ್ಮೆ ಕಿಂಗ್‌ ಮೇಕರ್: ಬಸವರಾಜ ಹೊರಟ್ಟಿ

Update: 2020-02-08 17:08 GMT

ಧಾರವಾಡ, ಫೆ.8: ಬಿಜೆಪಿಲ್ಲಿ ಅತೃಪ್ತಿಯ ಹೊಗೆ ಶುರುವಾಗಿದೆ. ಹೀಗಾಗಿ ರಾಜ್ಯದ ರಾಜಕಾರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ಗಟ್ಟಿಯಾಗಿ ಇದೆ ಅಂತಿದ್ದಾರೆ. ಆದರೆ, ಒಳಗಿಂದೊಳಗೆ ಮೂಲ ಬಿಜೆಪಿಯವರಿಗೆ ಬಹಳ ನೋವುಗಳಿವೆ. ಬಸನಗೌಡ ಪಾಟೀಲ್ ಯತ್ನಾಳ್ ಅಂತವರಿಗೆ ಯಾವ ಸ್ಥಾನವು ಇಲ್ಲವೆಂದರೆ ಮನಸಿಗೆ ನೋವಾಗುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.

ನನಗೆ ಅನಿಸಿದಂತೆ ಸರಕಾರದಲ್ಲಿ ಅತೃಪ್ತಿಯ ಹೊಗೆ ಶುರುವಾದರೆ ಅದು ಬಹಳ ಕಷ್ಟ. ಕೆಲ ಬಿಜೆಪಿ ಶಾಸಕರು ಬಿಜೆಪಿಗೆ ಹೆಚ್ಚು ಕಮ್ಮಿ ಮಾಡಿದರೆ ಆಪರೇಷನ್ ಕಮಲ ಹೋಗಿ ಬೇರೇನೇ ಆಗುತ್ತೆ. ಇಂತಹ ಸಂದರ್ಭದಲ್ಲಿ ಸಹಜವಾಗಿ ಕುಮಾರಸ್ವಾಮಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ ಅವರು ಅಭಿಪ್ರಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News