ನೂತನ ಸಚಿವರು ಪೇಮೆಂಟ್ ಗಿರಾಕಿಗಳು: ಎಚ್.ಆಂಜನೇಯ

Update: 2020-02-08 18:12 GMT

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟದಾಗಿ ಮಾತಾಡಿದರೆ ಬ್ರೇಕಿಂಗ್ ನ್ಯೂಸ್ ಆಗುತ್ತದೆ. ಆ ನಿಟ್ಟಿನಲ್ಲಿ ನೂತನ ಸಚಿವರು ಹೀಗೆ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರು ಪೇಮೆಂಟ್ ಗಿರಾಕಿಗಳು. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸದ್ಯ ಬಿಜೆಪಿ ಸರ್ಕಾರಕ್ಕೆ ತೊಂದರೆ ಇಲ್ಲ. ಆಪತ್ತು ಬಂದರೆ ಮತ್ತೆ ಬಿಜೆಪಿಯವರು ಇಪ್ಪತ್ತು ಶಾಸಕರ ರಾಜೀನಾಮೆ ಕೊಡಿಸುತ್ತಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News