ಸಿದ್ದಾಪುರದಲ್ಲಿ ಮುಂದುವರಿದ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ

Update: 2020-02-10 04:44 GMT

ಸಿದ್ದಾಪುರ (ಕೊಡಗು), ಫೆ.10: ಕಾಡಾನೆ ದಾಳಿಯಿಂದ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದಲ್ಲಿ ಗುಹ್ಯ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

 ಚೆನ್ನಯ್ಯನಕೋಟೆ ನಿವಾಸಿ ಕಾರ್ಮಿಕ ಸುನೀಲ್ ಎಂಬವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ ತನ್ನ ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಗುಹ್ಯ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ಮೂರು ಕಾಡಾನೆಗಳನ್ನು ಪ್ರತ್ಯಕ್ಷಗೊಂಡಿವೆ. ಇದರಿಂದ ಗಾಬರಿಗೊಂಡ ಸುನೀಲ್ ಬೈಕ್ ಬಿಟ್ಟು ಓಡಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾಡಾನೆ ಸುನೀಲ್ ಮೇಲೆ ದಾಳಿ ನಡೆಸಿದೆ. ಇದರಿಂದ ಅವರ ಕಾಲು ಹಾಗೂ ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎರಡು ದಿನಗಳ ಹಿಂದೆ ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಳೆಗಾರ ಪೆಮ್ಮಯ್ಯ ಎಂಬವರು ಸಾವನ್ನಪ್ಪಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News