ನನ್ನ ಯೋಗ್ಯತೆಗೆ ಸಚಿವ ಸ್ಥಾನವಲ್ಲ, ಸಿಎಂ ಸ್ಥಾನವೇ ಸಿಗಬೇಕು: ಉಮೇಶ್ ಕತ್ತಿ

Update: 2020-02-10 13:39 GMT

ಬೆಳಗಾವಿ, ಫೆ.10: ನನ್ನ ಯೋಗ್ಯತೆಗೆ ಸಚಿವ ಸ್ಥಾನ ಮಾತ್ರವಲ್ಲದೆ, ಬಿ.ಎಸ್.ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನವೂ ನನಗೆ ದೊರೆಯಬೇಕೆಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಕೈತಪ್ಪಿದೆ ಎಂದು ಯಾರೊಂದಿಗೂ ಸಿಟ್ಟು ಮಾಡಿಕೊಂಡಿಲ್ಲ. ಅಲ್ಲದೆ, ಮಂತ್ರಿ ಮಾತ್ರವಲ್ಲದೆ, ಮುಖ್ಯಮಂತ್ರಿ ಸ್ಥಾನ ಪಡೆಯಲು ನಾನು ಯೋಗ್ಯವಾಗಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಪ್ರಯತ್ನ ಮುಂದುವರೆದಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಎಸ್ಸೈ ನೇತೃತ್ವದ ಬಿಜೆಪಿ ಸರಕಾರ ಇದ್ದು, ಉತ್ತಮ ಆಡಳಿತ ನೀಡುತ್ತಾರೆ. ಇನ್ನು, ನಾನು ಈಗಾಗಲೇ 13 ವರ್ಷ ಮಂತ್ರಿಯಾಗಿದ್ದೇನೆ. ಹೀಗಾಗಿ ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂದರು.

ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಖಾತೆ ಕೊಡದೆ ಇದ್ದುದ್ದಕ್ಕೆ ಮುನಿಸಿಲ್ಲ. ನನ್ನ ಹೆಂಡತಿ ಜತೆಗೆ ನಾನು ಎಂದೂ ಮುನಿಸಿಕೊಳ್ಳುವುದಿಲ್ಲ. ಹೀಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೂ ಮುನಿಸಿನ ಪ್ರಶ್ನೆ ಬರಲ್ಲ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News