ಪುತ್ತೂರು: ವಿದ್ಯತ್ ಅವಘಡ ಗಾಯಾಳು ಮೃತ್ಯು

Update: 2020-02-10 17:27 GMT

ಪುತ್ತೂರು: ಕೆಲ ದಿನಗಳ ಹಿಂದೆ ನಗರದ ಬೊಳುವಾರು ಎಂಬಲ್ಲಿ ಖಾಸಗಿ ಆಸ್ಪತ್ರೆಯ ಕಟ್ಟಡವೊಂದರಲ್ಲಿ ಸುಣ್ಣ ಬಣ್ಣ ಬಳಿಯುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಉಂಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ  ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಪುತ್ತೂರು ನಗರದ ಕಸ್ಬಾ ಬಪ್ಪಳಿಗೆ ನಿವಾಸಿ ದೀಕ್ಷಿತ್ (27) ಮೃತ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ದೀಕ್ಷಿತ್ ಅವರು ಫೆ. 6ರಂದು ಖಾಸಗಿ ಆಸ್ಪತ್ರೆಯ ಕಟ್ಟಡದ ಮೇಲಿನ ಶೀಟ್‍ನಲ್ಲಿ ನಿಂತುಕೊಂಡು ಬಣ್ಣ ಬಳಿಯುವ ಕೆಲಸದಲ್ಲಿ ನಿರತರಾಗಿದ್ದ ವೇಳೆಯಲ್ಲಿ ಪಕ್ಕದಲ್ಲಿರುವ ವಿದ್ಯುತ್ ಪರಿವರ್ತಕದಿಂದ ವಿದ್ಯುತ್ ಸ್ಪಾರ್ಕ್ ಆಗಿ ಬೆಂಕಿ ಜ್ವಾಲೆ ಬಂದಿತ್ತು. ಈ ಜ್ವಾಲೆ ದೀಕ್ಷಿತ್ ಅವರ ಮುಖಕ್ಕೆ ತಾಗಿದ್ದ ಕಾರಣ ಅವರು  ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News