ಕೆಪಿಎಸ್ಸಿ ಹೆಸರಿನಲ್ಲಿ ವಂಚನೆ: ಯುವಕ ಸೆರೆ

Update: 2020-02-10 18:22 GMT

ಬೆಂಗಳೂರು, ಫೆ.10: ಕೆಪಿಎಸ್ಸಿ ಮೂಲಕ ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪ ಸಂಬಂಧ ಯುವಕನೋರ್ವನನ್ನು ಇಲ್ಲಿನ ಕೇಂದ್ರ ವಿಭಾಗದ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಅನಿಲ್ ಕುಮಾರ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಗಿರೀಶ್ ಎಂಬುವರ ಮೊಬೈಲ್ ಮೂಲಕ ಸಂಪರ್ಕಿಸಿದ್ದ ಆರೋಪಿ ಅನಿಲ್ ಕುಮಾರ್ ಕೆಪಿಎಸ್ಸಿ ಮೂಲಕ ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಬಳಿಕ, ಇತರೆ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡುವಂತೆ ಸೂಚಿಸಿದ್ದ. ಇದನ್ನು, ನಂಬಿ ಹಲವು ವ್ಯಕ್ತಿಗಳಿಂದ ಹಣ ಸಂಗ್ರಹಿಸಿ ಅನಿಲ್ ಕುಮಾರ್‌ಗೆ ಗಿರೀಶ್ ನೀಡಿದ್ದ ಎನ್ನಲಾಗಿದೆ.

ಆದರೆ, ಹಣ ಪಡೆದು ತಲೆಮರೆಸಿಕೊಂಡಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡ ಇಲ್ಲಿನ ವಿಧಾನಸೌಧ ಠಾಣಾ ಪೊಲೀಸರು, ಆರೋಪಿ ಅನಿಲ್ ಕುಮಾರ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News