ಮದ್ಯದ ಅಮಲಿನಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋಗಳಿಗೆ ಢಿಕ್ಕಿ: ಬಸ್ ಚಾಲಕನ ಬಂಧನ

Update: 2020-02-10 18:25 GMT

ಬೆಂಗಳೂರು, ಫೆ.10: ಮದ್ಯ ಸೇವಿಸಿದ ಮಿನಿ ಬಸ್ ಚಾಲಕನೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋಗಳಿಗೆ ಢಿಕ್ಕಿ ಹೊಡೆದ ಪ್ರಕರಣ ಸಂಬಂಧ ಓರ್ವನನ್ನು ಇಲ್ಲಿನ ಯಶವಂತಪುರ ಸಂಚಾರ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ನಿವಾಸಿ ಚಾಲಕ ವೆಂಕಟಸ್ವಾಮಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ?: ಸೋಮವಾರ ಬೆಳಗ್ಗೆ ಗೋರಗುಂಟೆ ಪಾಳ್ಯ ಕಡೆಯಿಂದ ನಗರದ ಕಡೆಗೆ ಬರುತ್ತಿದ್ದ ಮಿನಿ ಬಸ್ ಚಾಲಕ ವೆಂಕಟಸ್ವಾಮಿ, ಮದ್ಯದ ಅಮಲಿನಲ್ಲಿ ನಿಯಂತ್ರಣ ತಪ್ಪಿ ಆಟೊಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂರು ಆಟೋಗಳು ಜಖಂ ಆಗಿದ್ದು ಚಾಲಕರಿಗೆ ತಲೆ, ಕಾಲು, ಕೈ ಭಾಗಗಳಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅದೃಷ್ಟವಶಾತ್ ಬಸ್‌ನಲ್ಲಿ ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಚಾಲಕ ವೆಂಕಟಸ್ವಾಮಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News