ಸಚಿವ ಬಿಸಿ ಪಾಟೀಲ್ಗೆ ಖಾತೆ ಬದಲಾವಣೆ ಮಾಡಿದ ಸಿಎಂ ಯಡಿಯೂರಪ್ಪ
Update: 2020-02-11 09:06 GMT
ಬೆಂಗಳೂರು, ಫೆ.11: ಅರಣ್ಯ ಖಾತೆ ಇಲಾಖೆ ಜವಾಬ್ದಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಬಿ.ಸಿ.ಪಾಟೀಲ್ಗೆ ಸಿಎಂ ಯಡಿಯೂರಪ್ಪ ಕೃಷಿ ಖಾತೆ ನೀಡಿ ಸಮಾಧಾನಪಡಿಸಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಹೆಚ್ಚುವರಿಯಾಗಿ ಕೃಷಿ ಖಾತೆಯನ್ನು ವಹಿಸಲಾಗಿತ್ತು. ಬೊಮ್ಮಾಯಿಗೆ ಕೃಷಿ ಬದಲಿಗೆ ಅರಣ್ಯ ಹೆಚ್ಚುವರಿ ಖಾತೆ ನೀಡಲಾಗಿದೆ. ಈಗಾಗಲೇ ಪರಿಷ್ಕೃತ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದೆ. ಆನಂದ್ ಸಿಂಗ್ ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ತನಗೆ ನೀಡಲಾಗಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ಇಂಧನ ಖಾತೆ ನೀಡಲು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ ಅವರು ಇತ್ತೀಚೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ 11 ಮಂದಿಗೆ ಸೋಮವಾರ ಖಾತೆ ಹಂಚಿಕೆ ಮಾಡಿದ್ದರು.