×
Ad

ಬೆಂಗಳೂರು-ವಾಸ್ಕೋ ಹೊಸ ರೈಲು ಘೋಷಣೆ

Update: 2020-02-11 21:14 IST

ಉಡುಪಿ, ಫೆ.11: ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ಹೊಸ ರೈಲು ಘೋಷಿಸಿ ದ್ದಾರೆ. ಈ ರೈಲು ಪಡೀಲ್ ಬೈಪಾಸ್ ಮೂಲಕ ಉಡುಪಿಯನ್ನು ತಲುಪಲಿದೆ.

ಸಂಸದೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿ ಸಚಿವರಿಗೆ ಈ ಬಹು ಬೇಡಿಕೆ ಯನ್ನು ಸಲ್ಲಿಸಿದ ಸಂದರ್ಭ, ಸಚಿವರು ಖುದ್ದಾಗಿ ಸಂಸದರ ಸಮ್ಮುಖ ದಲ್ಲಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕ್ರಮ ಕೈಗೊಂಡಿದ್ದಾರೆ. ಈ ಹೊಸ ರೈಲಿನ ಸೇವೆಯನ್ನು ತಕ್ಷಣವೇ ಆರಂಭಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ, ನೈರುತ್ಯ ರೈಲ್ವೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ರೈಲು ಸೇವೆಯು ಮಂಗಳೂರು ಸೆಂಟ್ರಲ್ ಹಾಗೂ ಜಂಕ್ಷನ್ ನಿಲ್ದಾಣ ಗಳಲ್ಲಿ ಎರಡೂವರೆ ಗಂಟೆಗಳಷ್ಟು ಕಾಲದ ಅನಗತ್ಯ ಕಾಯುವಿಕೆ ಯನ್ನು ತಪ್ಪಿಸಿ, ಬೆಂಗಳೂರು-ಉಡುಪಿ/ಕುಂದಾಪುರ ಮಧ್ಯೆ ರೈಲು ಪ್ರಯಾಣ ಸಮಯವನ್ನು ಮೂರು ಗಂಟೆಗಳಷ್ಟು ಕಾಲ ಕಡಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಯ ಜನತೆ ಕಡಿಮೆ ಸಮಯದಲ್ಲಿ ಕರಾವಳಿ ಕರ್ನಾಟಕ ವನು್ನ ತಲುಪುವಂತೆ ಮಾಡಲಾಗುತ್ತದೆ.

ಈ ರೈಲು ಬೆಂಗಳೂರಿನಿಂದ ಸಂಜೆ 6:45ಕ್ಕೆ ಹೊರಟು, ಬೆಳಗ್ಗೆ 04:50ಕ್ಕೆ ಉಡುಪಿ, 5:18ಕ್ಕೆ ಕುಂದಾಪುರಕ್ಕೆ ತಲುಪಲಿದೆ. ಸಂಜೆ 4:40ಕ್ಕೆ ವಾಸ್ಕೋದಿಂದ ಆರಂಭಗೊಂಡು, ರಾತ್ರಿ 10:54ಕ್ಕೆ ಕುಂದಾಪುರ, 11:24ಕ್ಕೆ ಉಡುಪಿಯಿಂದ ಹೊರಟು ಬೆಂಗಳೂರಿಗೆ ಬೆಳಗ್ಗೆ ಸುಮಾರು 9ಗಂಟೆಗೆ ತಲುಪಲಿದೆ.

ಉಡುಪಿ-ಕುಂದಾಪುರದ ಪ್ರಯಾಣಿಕರಿಗೆ ಈ ರೈಲು ಬೆಂಗಳೂರು ಹಾಗೂ ವಾಸ್ಕೋವನ್ನು ಸಂಪರ್ಕಿಸಲು ಬೇಕಾದ ಎರಡು ರೈಲಿನ ಸೌಲಭ್ಯ ವನ್ನು ಒಂದೇ ರೈಲಿನ ಮೂಲಕ ಕಲ್ಪಿಸಿಕೊಡುತ್ತಲಿದೆ. ಗೋವಾ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಅವಶ್ಯವಿದ್ದ ರೈಲಿನ ಬೇಡಿಕೆಯನ್ನೂ ಈಡೇರಿಸಲಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News