ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ವಿದ್ಯಾರ್ಥಿ: ಕಾಲಿನ ಮೇಲೆ ಚಕ್ರ ಹರಿದು ಗಾಯ

Update: 2020-02-12 16:07 GMT

ಮೈಸೂರು,ಫೆ.12: ವಿದ್ಯಾರ್ಥಿಯೊಬ್ಬ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದಿದ್ದು, ಈ ವೇಳೆ ವಿದ್ಯಾರ್ಥಿಯ ಕಾಲಿನ ಮೇಲೆ ಬಸ್ ಹರಿದು ಗಾಯಗೊಂಡಿರುವ ಘಟನೆ ಮೈಸೂರಿನ ಗದ್ದಿಗೆ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಘಟನೆಯಿಂದ ವಿದ್ಯಾರ್ಥಿ ಗಾಯಗೊಂಡಿರುವುದರಿಂದ ಪರಿಹಾರ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭನಟನೆ ನಡೆಸಿದರು.

ಕಾಲೇಜಿಗೆ ಹೋಗುವುದಕ್ಕಾಗಿ ಬಸ್ ಹತ್ತಲು ಮುಂದಾದ ವಿದ್ಯಾರ್ಥಿ ಕಿರಣ್, ಬಸ್ ಮುಂದಕ್ಕೆ ಚಲಿಸಿದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಸ್ ನ ಚಕ್ರ ಈತನ ಕಾಲಿನ ಮೇಲೆ ಹರಿದು ಗಾಯಗೊಂಡಿದ್ದಾನೆ.

ಈತ ಮಹಾರಾಜ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ಓದುತ್ತಿದ್ದು, ಕಾಲೇಜಿಗೆ ಬರುವ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ. ವಿದ್ಯಾರ್ಥಿಗಳು ಈ ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗದ್ದಿಗೆಯ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಬಂದು ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News