ಒಂದೇ ಕುಟುಂಬದ ಐವರ ಮೃತದೇಹ ಪತ್ತೆ

Update: 2020-02-12 16:16 GMT

ಹೊಸದಿಲ್ಲಿ, ಫೆ. 12: ಈಶಾನ್ಯ ದಿಲ್ಲಿಯ ಭಜನಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬ ಐವರು ಸದಸ್ಯರು ನಿಗೂಡ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬ ಇತ್ತೀಚೆಗೆ ಈ ಮನೆ ಬಾಡಿಗೆ ಪಡೆದು ವಾಸಿಸಲು ಆರಂಭಿಸಿತ್ತು. ಶಂಭುನಾಥ್ (43) ಅವರು ತನ್ನ ಪತ್ನಿ ಸುನಿತಾ (38) ಹಾಗೂ ಮೂವರು ಮಕ್ಕಳಾದ ಕವಿತಾ (16), ಸಚಿನ್ (14) ಹಾಗೂ ಪುಟ್ಟ ಮಗುವಿನೊಂದಿಗೆ ಈ ಮನೆಯಲ್ಲಿ ವಾಸಿಸುತ್ತಿದ್ದರು. ಲಾಕ್ ಮಾಡಲಾದ ಮನೆಯ ಒಳಗಿನಿಂದ ದುರ್ನಾತ ಹೊರ ಹೊಮ್ಮಿದ ಹಿನ್ನೆಲೆಯಲ್ಲಿ ನೆರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಬುಧವಾರ ಬೆಳಗ್ಗೆ 11.30ಕ್ಕೆ ಆಗಮಿಸಿ ಪೊಲೀಸರು ಮನೆಯ ಬಾಗಿಲು ಒಡೆದು ನೋಡಿದಾಗ ಐವರ ಮೃತದೇಹ ಪತ್ತೆಯಾಯಿತು. ಕೊಳೆತ ಸ್ಥಿತಿಯಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಸಾವಿಗೆ ಕಾರಣ ಇದುವರೆಗೆ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News