ಬ್ಲೇಡಿನಿಂದ ಕೊಯ್ದುಕೊಂಡು ಆತ್ಮಹತ್ಯೆ
Update: 2020-02-12 17:25 GMT
ಬ್ರಹ್ಮಾವರ, ಫೆ.12: ಮಾನಸಿಕ ಖಾಯಿಲೆ, ಕಾಲುಗಳ ಗಂಟುನೋವು ಮತ್ತು ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬ್ಲೇಡಿ ನಿಂದ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮುದ್ದುಮನೆ ಎಂಬಲ್ಲಿ ನಡೆದಿದೆ.
ಮೃತರನ್ನು ಶಿರೂರು ನಿವಾಸಿ ಶಂಕರ ಮರಕಾಲ(65) ಎಂದು ಗುರುತಿಸ ಲಾಗಿದೆ. ಇವರು ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.6ರಂದು ಸಂಜೆ 4:30ರ ಸುಮಾರಿಗೆ ಮನೆಯಲ್ಲಿ ವಿಷ ಸೇವಿಸಿ, ಹೊಟ್ಟೆಯನ್ನು ಬ್ಲೇಡಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು, ಫೆ.11ರಂದು ಬೆಳಗ್ಗೆ 9:40ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.