‪ಸೋಲುಗಳು ಪಾಠವಾಗಬೇಕು, ಅಭ್ಯಾಸವಾಗಬಾರದು: ದಿಲ್ಲಿಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಶಾಸಕ ಎನ್.ಎ ಹಾರಿಸ್

Update: 2020-02-13 17:22 GMT
Photo: facebook/ mlanaharis

ಬೆಂಗಳೂರು, ಫೆ.13: ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ. ‪ಆದರೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಚಿಂತಿಸುತ್ತಿಲ್ಲ. ‬‪ಸೋಲುಗಳು ಪಾಠವಾಗಬೇಕು, ಅಭ್ಯಾಸವಾಗಬಾರದು ಎಂದು ಶಾಂತಿನಗರ ಶಾಸಕ ಎನ್.ಎ ಹಾರಿಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತನ್ನ ಫೇಸ್ಬುಕ್ ಪೋಸ್ಟ್ ನಲ್ಲಿ ಬರೆದಿರುವ ಅವರು, ದಿಲ್ಲಿಯಂತಹ ಫಲಿತಾಂಶ ಹಲವಾರು ಬಾರಿ ಬಂದಿದೆ. ಆದರೂ ಈ ಬಗ್ಗೆ ಪಕ್ಷ ಯೋಚನೆ ಮಾಡುತ್ತಿಲ್ಲ. ‪ತನ್ನ ತಪ್ಪುಗಳನ್ನು ತಿದ್ದಿಕೊಳ್ಳದೆ ಇರುವುದು ಯೋಚಿಸಬೇಕಾದ ವಿಚಾರ ಎಂದು ತಿಳಿಸಿದ್ದಾರೆ.

ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ.‬ ‪ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ. ಪಕ್ಷದಲ್ಲಿ ಪದಾಧಿಕಾರಿಗಳು ಇರುವುದು ಯಾವ ಕೆಲಸಕ್ಕಾಗಿ ? ಪಕ್ಷವನ್ನು ಕಟ್ಟುವುದಕ್ಕಾಗಿಯೊ? ಅಥವಾ ತಮ್ಮ ಸ್ವಹಿತಾಸಕ್ತಿಗಳಿಗಾಗಿ ಪಕ್ಷವನ್ನು ಬಲಿ ಕೊಡುವುದಕ್ಕಾಗಿಯೋ ಎಂದು ಪ್ರಶ್ನಿಸಿರುವ ಹಾರಿಸ್, ದಿಲ್ಲಿಯ ಫಲಿತಾಂಶ ಪಕ್ಷದ ಹಿರಿಯ ನಾಯಕರಿಗೆ ಸಂದೇಶವಾಗಬೇಕು ಎಂಬುದು ನನ್ನ ಆಗ್ರಹ ಎಂದು ತಿಳಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News