ಬಿ.ಯಮುನಾ

Update: 2020-02-13 18:31 GMT

ಬಂಟ್ವಾಳ, ಫೆ.13: ಸತತ ಎರಡು ಅವಧಿಯಲ್ಲಿ ಬಂಟ್ವಾಳ ಪುರಸಭೆಗೆ ಸಿಪಿಐನಿಂದ  ಆಯ್ಕೆಯಾದ ಕಾ.ಬಿ.ಯಮುನಾ ಅವರು ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 

 ಮೃತ ಯಮುನಾ ತನ್ನ ಹಿರಿಯ ಪುತ್ರ ಕುಮಾರ್ ರವರೊಂದಿಗೆ ವಾಸಿಸುತ್ತಿದ್ದರು. ಮೃತರು ಕೌನ್ಸಿಲರ್ ಆಗಿದ್ದ ಸಂದರ್ಭ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಬೀಡಿ ಕಾರ್ಮಿಕರ ಚಳವಳಿ, ರೈತರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ. ಮೃತರ ಅಕಾಲಿಕ ನಿಧನದ ಬಗ್ಗೆ ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್, ಸಹ ಕಾರ್ಯದರ್ಶಿ ಸುರೇಶ್ ಕುಮಾರ್, ಜಿಲ್ಲಾ ಸಹ ಕಾರ್ಯದರ್ಶಿ ವಿ.ಎಸ್ ಬೇರಿಂಜ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ರಾವ್, ಕರುಣಾಕರ್, ಪಿ.ವಿಠಲ ಬಂಗೇರ, ಪ್ರೇಮನಾಥ ಕೆ. ಮಾಜಿ ಉಸ್ತುವಾರಿ ಸಚಿವ ರಮನಾಥ ರೈ, ಚಂದ್ರ ಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಉದ್ಯಮಿ  ಸೇಸಪ್ಪ ಕೋಟ್ಯಾನ್, ಐತಪ್ಪ ಆಳ್ವ ಅಂತಿಮ ದರ್ಶನ ಪಡೆದು ಸಂತಾಪ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ