ಜಾಮೀನು ಕೋರಿ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಸುಪ್ರೀಂಗೆ ಅರ್ಜಿ

Update: 2020-02-14 08:29 GMT

ಹೊಸದಿಲ್ಲಿ, ಫೆ.14: ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಶುಕ್ರವಾರ  ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಗಲಭೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಗೆ  ಜೈಲು ಶಿಕ್ಷೆ ವಿಧಿಸಲಾಗಿದ್ದು, ಪ್ರಸ್ತುತ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಹೋಳಿ ರಜೆಯ ನಂತರ ಜಾಮೀನು ಅರ್ಜಿಯನ್ನು  ಸುಪ್ರೀಂ ಕೊರ್ಟ್ ಆಲಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News