ಮಂಗಳೂರು : ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಮಾನವ ಸರಪಳಿ

Update: 2020-02-14 14:18 GMT

ಮಂಗಳೂರು, ಫೆ.14: ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ‘ವಿ ದಿ ಪೀಪಲ್ ಆಫ್ ಇಂಡಿಯಾ’ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಮಾನವ ಸರಪಳಿ ನಡೆಯಿತು.

ನಗರದ ಸ್ಟೇಟ್‌ಬ್ಯಾಂಕ್-ಹ್ಯಾಮಿಲ್ಟನ್ ಸರ್ಕಲ್ ಬಳಿಯ ‘ಮಸ್ಜಿದ್ ಇಬ್ರಾಹೀಂ ಖಲೀಲ್’ನಿಂದ ಕುದ್ರೋಳಿಯ ಜಾಮಿಯಾ ಮಸ್ಜಿದ್‌ವರೆಗೆ ನಡೆದ ಮಾನವ ಸರಪಳಿಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಕಾಯ್ದೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಸ್ಟೇಟ್‌ಬ್ಯಾಂಕ್‌ನಿಂದ ಕುದ್ರೋಳಿ ಪರಿಸರದ 9 ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್ ಮಾಡಿದ ಬಳಿಕ ಸುಮಾರು 1:45ಕ್ಕೆ ಪರಸ್ಪರ ಕೈ ಜೋಡಿಸಿದ ಸಾವಿರಾರು ಮಂದಿ ‘ಸಂವಿಧಾನ ಉಳಿಸಿ-ಭಾರತ ಉಳಿಸಿ’ ಎಂದು ಆಗ್ರಹಿಸಿದರು. ಅಲ್ಲದೆ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ರಾಷ್ಟ್ರಗೀತೆಯೊಂದಿಗೆ ಸುಮಾರು 2:15ಕ್ಕೆ ಮಾನವ ಸರಪಳಿಯನ್ನು ಸಮಾಪ್ತಿಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News