ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
Update: 2020-02-14 16:52 GMT
ಗಂಗೊಳ್ಳಿ, ಫೆ.14: ತ್ರಾಸಿಯಲ್ಲಿ ಫೆ.13ರಂದು ರಾತ್ರಿ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಗಂಗೊಳ್ಳಿ ಗುಡ್ಡಿಕೇರಿ ನಿವಾಸಿ ಸತೀಶ (35) ಎಂದು ಗುರುತಿಸಲಾಗಿದೆ. ಭಟ್ಕಳದಿಂದ ಬಂದ ಇವರು ತ್ರಾಸಿಯಲ್ಲಿ ಬಸ್ ಇಳಿದು, ರಸ್ತೆ ದಾಟಲು ಡಿವೈಡರ್ ಮಧ್ಯೆ ನಿಂತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಫೆ.14ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿ ಯಾಗದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.