ಗುರುಪುರ: ಫೆ.23ರಂದು ರಕ್ತದಾನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Update: 2020-02-14 18:30 GMT

ಗುರುಪುರ, ಕೈಕಂಬ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ (S.J.M)  ಕೈಕಂಬ ರೇಂಜ್ ಇದರ ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರವು ದಿನಾಂಕ ಫೆ.23 ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1:30 ರ ತನಕ ಗುರುಪುರ ಕೈಕಂಬದ ಬಿ.ಎಸ್ ಟವರ್ ಮುಂಭಾಗದ ಜಂಕ್ಷನ್ ನಲ್ಲಿ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರಿಗೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮುಝಮ್ಮಿಲ್ ನೂಯಿ ಅಡ್ಡೂರು (+918296086719) ರಫೀಕ್ (ಮುನ್ನ) ಕೈಕಂಬ (+919964873192),ಕೆ.ಎಚ್.ಯು ಶಾಫಿ ಮದನಿ ಕರಾಯ(+917353238846) ಇವರನ್ನು ಸಂಪರ್ಕಿಸುವಂತೆ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ (S.J.M) ಕೈಕಂಬ ರೇಂಜ್ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News