ಮೀಸಲಾತಿ ಕುರಿತು ಸುಪ್ರೀಂ ತೀರ್ಪು ಖಂಡನೀಯ: ಬಹುಜನ ಸಮಾಜ ಪಾರ್ಟಿ

Update: 2020-02-14 18:38 GMT

ಬೆಂಗಳೂರು, ಫೆ.14: ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಖಂಡನೀಯವಾಗಿದ್ದು. ಮೀಸಲಾತಿ ದುರ್ಬಲಗೊಳಿಸುವ ಸಂಚಿನ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹುನ್ನರ ನಡೆಸುತ್ತಿದೆ ಎಂದು ಬಹುಜನ ಸಮಾಜ ಪಾರ್ಟಿ ಆರೋಪಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾರ್ಟಿಯ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ, ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದ ಖಂಡನೀಯ. ಇಂತಹ ಮೀಸಲಾತಿ ವಿರೋಧಿ ತೀರ್ಪು ನಿಲ್ಲಬೇಕಾದರೆ ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್ ನ್ಯಾಯಾಧಿಶರ ನೇಮಕಾತಿಯಲ್ಲಿ ಮೀಸಲಾತಿ ತರಬೇಕು ಎಂದು ತಿಳಿಸಿದರು.

ಈ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ದವಾಗಿದೆ. ಈ ತೀರ್ಪು ಇತ್ತೀಚಿನ ಕೆಲ ವರ್ಷಗಳಿಂದ ಆರೆಸ್ಸೆಸ್‌ನ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಬಿಜೆಪಿ ಸಂಸದರು ಅನುಸರಿಸುತ್ತಿರುವ ಮೀಸಲಾತಿ ವಿರೋಧಿ ನೀತಿಗೆ ಪೂರಕವಾಗಿದೆ. ಇದೆಲ್ಲವನ್ನ ನೋಡಿದರೆ ಮೀಸಲಾತಿ ವಿರುದ್ದ ವ್ಯವಸ್ಥಿತ ಸಂಚಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಕೂಡಲೇ ಸುಪ್ರೀಂ ಕೋರ್ಟಿನ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಿ ಸೂಕ್ತಕ್ರಮ ವಹಿಸಬೇಕು ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News