ಸಾಗರ: ಕಾರು- ಲಾರಿ ಮುಖಾಮುಖಿ ಢಿಕ್ಕಿ; ಆರು ಮಂದಿಗೆ ಗಾಯ

Update: 2020-02-15 06:48 GMT

ಸಾಗರ, ಫೆ.15: ಟವೆರಾ ಕಾರು ಮತ್ತು ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ತಾಲೂಕಿನ ತಾಳಗುಪ್ಪ ಬಳಿ ಇಂದು ಬೆಳಗ್ಗೆ ನಡೆದಿದೆ.

ಕಾನ್ಲೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಅಪಘಾತದ ತೀವ್ರತೆಗೆ ಕಾರು ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದವರು ತುಮಕೂರು ಮೂಲದವರೆಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News