ಕಾರ್ಕಳ ಸಮೀಪ ಭೀಕರ ಅಪಘಾತ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
Update: 2020-02-15 16:32 GMT
ಬೆಂಗಳೂರು, ಫೆ.15: ಉಡುಪಿಯ ಕಾರ್ಕಳ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಹಲವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾರ್ಕಳ ತಾಲೂಕಿನ ಮಾಳ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಕುಟುಂಬದವರಿಗೆ ನನ್ನ ಸಾಂತ್ವನಗಳು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಸಿದ್ದಾರೆ.