ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2020-02-15 17:39 GMT

ಉಡುಪಿ, ಫೆ.15: ಬಡಗುಬೆಟ್ಟು ಮಿಷನ್ ಕಂಪೌಂಡ್ ಬಳಿಯ ಜಯಶ್ರೀ ಕಾಂಚನ್ ಎಂಬವರ ಬಾಡಿಗೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

2019ರ ನ.28ರಿಂದ 2020ರ ಫೆ.12ರ ಮಧ್ಯಾವಧಿಯಲ್ಲಿ ಮನೆಗೆ ನುಗ್ಗಿದ ಕಳ್ಳರು, ಕಪಾಟಿನಲ್ಲಿಟ್ಟಿದ್ದ 4 ಪವನ್ ತೂಕದ ಹವಳದ ಮಣಿಸರ ಹಾಗೂ 7 ಪವನ್ ತೂಕದ ಶಿವಾಜಿ ಚೈನ್ ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,50,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News