ಬಾವಿಗೆ ದೂಡಿ ಕೊಲೆ ಪ್ರಕರಣ: ಆರೋಪಿ ಬಂಧನ

Update: 2020-02-15 17:45 GMT

ಬ್ರಹ್ಮಾವರ, ಫೆ.15: ಬಾಕಿ ಹಣ ಪಾವತಿಸದೆ ಸತಾಯಿಸುತ್ತಿದ್ದ ದ್ವೇಷದಿಂದ ನಿರ್ಜೆಡ್ಡುವಿನ ಮನೋಜ್(21) ಎಂಬವರನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿರುವ ಪ್ರಕರಣದ ಆರೋಪಿ ನಿರ್ಜೆಡ್ಡುವಿನ ಸುನಿಲ್ ಶೆಟ್ಟಿ(21) ಎಂಬಾತನನ್ನು ಬ್ರಹ್ಮಾರ ಪೊಲೀಸರು ಇಂದು ಬಂಧಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಾಕಿ ಇರುವ 2,500ರೂ. ಹಣ ನೀಡದೆ ಸತಾಯಿಸುತ್ತಿರುವ ದ್ವೇಷದಿಂದ ಸುನೀಲ್ ಶೆಟ್ಟಿ, ಫೆ.14ರಂದು ಮನೋಜ್ ಮನೆಗೆ ತೆರಳಿ, ಬಾವಿ ಸಮೀಪ ಹಲ್ಲುಜ್ಜುತ್ತಿದ್ದ ಮನೋಜ್‌ನನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.

ತನಿಖೆ ನಡೆಸಿದ ಪೊಲೀಸರು ಇಂದು ಆರೋಪಿಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೊಲೆ ಮಾಡಿರುವ ವಿಚಾರವನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News