ಮಟ್ಕಾ ಜೂಜಾಟ ಅಡ್ಡೆಗೆ ಸಿಸಿಬಿ ದಾಳಿ: ಇಬ್ಬರ ಬಂಧನ
Update: 2020-02-15 18:29 GMT
ಬೆಂಗಳೂರು, ಫೆ.15: ಹಣ ಪಣವಾಗಿ ಕಟ್ಟಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದು ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಯಶವಂತಪುರದ ಜಿಲಾನಿ(30), ನಂದಿನಿ ಲೇಔಟ್ನ ಪ್ರಕಾಶ್(35) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಆರ್ಎಂಸಿ ಯಾರ್ಡ್ನ ಗಣೇಶ ದೇವಾಲಯದ ಮುಂಭಾಗ ಫುಟ್ಪಾತ್ನಲ್ಲಿ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬಾಂಬೆ ಕಲ್ಯಾಣ ಮಟ್ಕಾ ಜೂಜಾಟ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 73,500 ನಗದು, ಎರಡು ಮೊಬೈಲ್ ಜಪ್ತಿ ಮಾಡಲಾಗಿದ್ದು, ಇಲ್ಲಿನ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ತಿಳಿಸಿದೆ.