ಶರಣರ ಆಶಯವಾಗಿದ್ದ ಸಮಾನತೆ ಇನ್ನೂ ಸಾಧ್ಯವಾಗಿಲ್ಲ: ಗೋವಿಂದ ಕಾರಜೋಳ

Update: 2020-02-16 09:03 GMT

ಬೆಂಗಳೂರು. ಫೆ.16:  ವಿಶ್ವ ಗುರು ಬಸವಣ್ಣ ಹಾಗೂ ಅವರ ಸಮಕಾಲೀನ ಶರಣರು 900 ವರ್ಷಗಳ ಹಿಂದೆ ಸಾಮಾಜಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದ್ದರೂ‌ ಅಸಮಾನತೆ ಇನ್ನೂ ಅಳಿದಿಲ್ಲ. ಸಮಾನತೆ ಬರಲಿಲ್ಲ. ಶರಣರ ಆಶಯವಾಗಿದ್ದ ಸಾಮಾಜಿಕ  ಸಮಾನತೆ ಕುರಿತು ಇಂದು ಚಿಂತಿಸಬೇಕಿದೆ‌ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಭಿಪ್ರಾಯಿಸಿದ್ದಾರೆ.

ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಬಸವ ಕೇಂದ್ರಗಳು, ಬಸವ ಸಂಘಟನೆಗಳು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಸಹಯೋಗದಲ್ಲಿ ಬೆಂಗಳೂರಿನ ಬಿಐಇಸಿ ನಂದಿ ಗ್ರೌಂಡ್ಸ್ ನಲ್ಲಿ ರವಿವಾರ ಆಯೋಜಿಸಿದ್ದ ಶಿವಯೋಗ ಸಂಭ್ರಮ, 'ಅಸಂಖ್ಯ ಪ್ರಮಥರ ಗಣಮೇಳ'ದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

 ಶರಣರು ಜಾತ್ಯತೀತ ಸುಂದರ ಸಮಾಜ ನಿರ್ಮಾಣಕ್ಕೆ ಹೋರಾಟ ನಡೆಸಿದ್ದಾರೆ. ಅನೇಕ  ಮಾನವ ಹಕ್ಕುಗಳಿಗಾಗಿ ಪ್ರತಿಪಾದಿಸಿದ್ದಾರೆ. ಶೋಷಿತರು, ಕಾಯಕ ಯೋಗಿಗಳ ಏಳಿಗೆಗಾಗಿ ಶ್ರಮಿಸಿದ್ದಾರೆ. ಜಾತಿ ಮತ್ತು ಧರ್ಮ ದ ಹೆಸರಿನಲ್ಲಿ ಶೋಷಣೆಯ ವಿರುದ್ಧ ಬಂಡಾಯವೆದ್ದು, ಕ್ರಾಂತಿ ಮಾಡಿದ್ದಾರೆ.  ಜಾತ್ಯತೀತ  ಮಾನವ ಧರ್ಮ ಉದಯಕ್ಕೆ ಶ್ರಮಿಸಿದ್ದಾರೆ. ಅದೇ ಶ್ರೇಷ್ಠ ವಾದ ಧರ್ಮ ಬಸವ ಧರ್ಮ. ಅವರು ಪ್ರತಿ ಪಾದಿಸಿದಂತಹ ಅನೇಕ ಮಾನವ ಹಕ್ಕುಗಳು ಕಾಯ್ದೆಯ ರೂಪದಲ್ಲಿ ಅನುಷ್ಠಾನ ವಾಗುತ್ತಿವೆ.  ಮೊಟ್ಟ ಮೊದಲಿಗೆ ಸಂಸತ್ ಸ್ವರೂಪದ  ಅನುಭವ ಮಂಟಪ ಆಯೋಜಿಸಿ, ಮಾನವ ಹಕ್ಕು, ಸಮಾನತೆಗೆ , ಸಾಮಾಜಿಕ ಪಿಡುಗಳ ಕುರಿತು ಚರ್ಚಿಸಿ, ನಿರ್ಣಯ ಕೈಗೊಂಡಿದ್ದು , ಅದೇ ಮಾದರಿಯಲ್ಲಿ  ಸಂಸತ್ ನಲ್ಲಿ‌   ಚರ್ಚೆಗಳಾಗಿ  ನಿರ್ಣಯಗಳಾಗುತ್ತಿವೆ‌.  ಶರಣರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು‌  ಶರಣರ ಆಶಯದಂತೆ ಸುಂದರ  ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು‌ ಅವರು ಕರೆ ನೀಡಿದರು.

ಗಣಮೇಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News