ಮಂಗಳೂರು ವಿವಿ ಮಟ್ಟದ ‘ಗಣಿತ ಮಂಥನ’ ಸ್ಪರ್ಧೆ

Update: 2020-02-16 13:41 GMT

ಉಡುಪಿ, ಫೆ.11 ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಮಂಗಳೂರು ವಿವಿ ಗಣಿತಶಾಸ್ತ್ರ ವಿಭಾಗದ ಸಹಯೋಗದಲ್ಲಿ ಪದವಿ ಕಾಲೇಜಿನ ಗಣಿತಶಾಸ್ತ್ರದ ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಮಟ್ಟದ ‘ಗಣಿತ ಮಂಥನ’ ಸ್ಪರ್ಧಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಒಕ್ಕೂಟದ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿವಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್ ಕೆ.ಎಸ್., ಶೋಭಾ ಎಂ. ವಿಜ್ಞಾನ ನಿಕಾಯದ ಡೀನ್ ಪ್ರೊ.ರಾಮಚಂದ್ರ ಅಡಿಗ ಜಿ. ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಎಂ.ಚಂದ್ರಶೇಖರ್ ಸ್ವಾಗತಿಸಿದರು. ಉಪನ್ಯಾಸಕ ಡಾ.ರವೀಶ್ ಎಂ. ವಂದಿಸಿದರು. ವಿದ್ಯಾರ್ಥಿನಿ ವಿಜೇತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News