ಮದುವೆ ದಿಬ್ಬಣದ ಬಸ್- ಬೈಕ್ ನಡುವೆ ಅಪಘಾತ: ಒಂದೇ ಕುಟುಂಬದ ಮೂವರು ಮೃತ್ಯು

Update: 2020-02-16 13:58 GMT

ಶಿವಮೊಗ್ಗ, ಫೆ.16: ಮದುವೆ ದಿಬ್ಬಣದ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲ ವಿಠಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. 

ಹನುಂತಾಪುರದ ಈರಪ್ಪ (45), ಆಶಾ (34), ಹೇಮಂತ್ (7) ಮೃತಪಟ್ಟವರು. ಈ ಮೂವರು ಬೈಕ್ ನಲ್ಲಿ ಹೊಳೆಹೊನ್ನೂರು ಆಸ್ಪತ್ರೆಗೆ ತೆರಳುವಾಗ ದುರ್ಘಟನೆ ಸಂಭಿವಿಸಿದೆ.

ಆರೋಗ್ಯ ತಪಾಸಣೆಗಾಗಿ ಗರ್ಭಿಣಿ ಪತ್ನಿಯನ್ನು ತನ್ನ ಮಗನ ಜೊತೆ ಬೈಕ್ ನಲ್ಲಿ ಈರಪ್ಪ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮೂಡಲ ವಿಠಲಾಪುರ ಗ್ರಾಮದ ಬಳಿ ಶಿವಮೊಗ್ಗದಲ್ಲಿ ಮದುವೆ ಮುಗಿಸಿಕೊಂಡು ಗುಡುಮಘಟ್ಟಕ್ಕೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಹೊಳೆಹೊನ್ನುರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News