ಫೆ.17: ಪಿಎಫ್‌ಐ ಸಂಸ್ಥಾಪನಾ ದಿನದ ಅಂಗವಾಗಿ ರ್ಯಾಲಿ

Update: 2020-02-16 15:29 GMT

ಮಂಗಳೂರು, ಫೆ.16: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಫೆ.17ರಂದು ಬೆಳಗ್ಗೆ ರಾಜ್ಯದ ನೂರಾರು ಕೇಂದ್ರಗಳಲ್ಲಿ ಧ್ವಜಾರೋಹಣ ನಡೆಯಲಿದೆ. ಅಲ್ಲದೆ ಬಾಗಲಕೋಟ ಜಿಲ್ಲೆಯ ಜಮಖಂಡಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ದ.ಕ.ಜಿಲ್ಲೆಯ ದೇರಳಕಟ್ಟೆಯಲಿ ಯುನಿಟಿ ಮಾರ್ಚ್ ಮತ್ತು ಸಾರ್ವಜನಿಕ ರ್ಯಾಲಿ ನಡೆಯಲಿದೆ.

ಕುತ್ತಾರ್‌ನ ಮದನಿ ನಗರದಿಂದ ಅಪರಾಹ್ನ 2:30ಕ್ಕೆ ಆರಂಭಗೊಳ್ಳುವ ಯುನಿಟಿ ಮಾರ್ಚ್ ದೇರಳಕಟ್ಟೆ ಗ್ರೀನ್‌ವ್ಯೂ ಮೈದಾನದಲ್ಲಿ ಸಮಾಪನಗೊಳ್ಳಲಿದೆ. ಬಳಿಕ ನಡೆಯುವ ಸಾರ್ವಜನಿಕ ಸಮಾವೇಶವನ್ನು ಪಿಎಫ್‌ಐ ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ. ಶರೀಫ್ ಉದ್ಘಾಟಿಸಲಿದ್ದಾರೆ.

ಪತ್ರಕರ್ತ ರಾ. ಚಿಂತನ್, ಕ್ರೈಸ್ತಧರ್ಮಗುರು ಫಾ. ವಿಲಿಯಂ ಮಾರ್ಟಿಸ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಸಿಎಫ್‌ಐ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ಎನ್‌ಡಬ್ಲ್ಯುಎಫ್ ರಾಜ್ಯಾಧ್ಯಕ್ಷೆ ಝೀನತ್ ಗೂಡಿನಬಳಿ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಮತ್ತಿತರ ನಾಯರಕು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News