ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-02-16 17:32 GMT

ಕುಂದಾಪುರ, ಫೆ.16: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿ ರುವ ಪತಿಯ ವಿಚಾರವಾಗಿ ಮಾನಸಿಕವಾಗಿ ನೊಂದ ಕನ್ಯಾನ ಗ್ರಾಮದ ಕೂಡ್ಲು ನಿವಾಸಿ ಸುಜಾತ ಶೆಟ್ಟಿ(47) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.15 ರಂದು ಸಂಜೆ ವೇಳೆ ಮನೆಯಲ್ಲಿ ವಿಷ ಸೇವಿಸಿ, ಕೋಣೆಯ ಮೇಲ್ಚಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಅವಿವಾಹಿತರಾದ ಕಾರ್ಕಳ ಸತ್ಯನಾರಾಯಣ ನಗರ ನಿವಾಸಿ ಹರೀಶ್ ದೇವಾಡಿಗ ಎಂಬವರು ಒಂಟಿತನದ ಕೊರಗಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.15ರಂದು ರಾತ್ರಿ ವೇಳೆ ಬೆಡ್‌ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News