ಬ್ಯಾಂಕಿಂಗ್ ಮತ್ತು ಸಾಫ್ಟ್‌ವೇರ್ ತರಬೇತಿಗಾಗಿ ಅರ್ಜಿ ಆಹ್ವಾನ

Update: 2020-02-16 17:55 GMT

ಬೆಂಗಳೂರು, ಫೆ.16: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಐಸಿಐಸಿಐ ಫೌಂಡೇಷನ್ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾವಂತ ನಿರುದ್ಯೋಗಿ ಯುವಕ /ಯುವತಿಯರಿಗಾಗಿ ಬ್ಯಾಂಕಿಂಗ್ ಮತ್ತು ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ತರಬೇತಿ ಪಡೆಯಲು ಜಿಲ್ಲಾ ಕಚೇರಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಫೆ.20ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9611075559 ನ್ನು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಬೆಂಗಳೂರಿನ ಐಸಿಐಸಿಐ ಬ್ಯಾಂಕ್‌ನ ಯೋಜನಾ ಸಂಯೋಜಕರನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News