ಕಳ್ಳಭಟ್ಟಿ ಸೇವಿಸಿ ಕನಿಷ್ಠ 14 ಸಾವು

Update: 2020-02-16 18:03 GMT

ಗಿರಿಧಿ, ಫೆ. 16: ಜಾರ್ಖಂಡ್‌ನ ಗಿರಿಧಿ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ. ಗಿರಿಧಿ ಜಿಲ್ಲೆಯ ಡಿಯೋರಿ ಬ್ಲಾಕ್‌ನ ಸರಿಯಾ ಪ್ರದೇಶದಲ್ಲಿ ಕಳ್ಳಭಟ್ಟಿ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ. ಹಲವರು ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಗಿರಿಧಿ ಡಿ.ಸಿ. ರಾಹುಲ್ ಕುಮಾರ್ ಆದೇಶಿಸಿದ್ದಾರೆ. ಆರೋಗ್ಯ ಇಲಾಖೆ ತಂಡ ಗ್ರಾಮಕ್ಕೆ ಆಗಮಿಸಿ ರಕ್ತದ ಮಾದರಿಗಳನ್ನು ಸಂಗ್ರಹಿಸಿದೆ. ಈ ನಡುವೆ ಈ ಘಟನೆ ಕುರಿತಂತೆ ಪ್ರತಿಪಕ್ಷ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News