‘ಅಶೋ..’ ಕವನ ಸಂಕಲನ ಬಿಡುಗಡೆ

Update: 2020-02-17 08:30 GMT

ಮಂಗಳೂರು, ಫೆ. 17: ಅಮೃತ ಪ್ರಕಾಶ ಪತ್ರಿಕೆಯ 23ನೇ ಸರಣಿ ಕಾರ್ಯಕ್ರಮದ ಅಂಗವಾಗಿ ಸಾಹಿತಿ, ವಿಶೇಷಮಕ್ಕಳ ಶಿಕ್ಷಣ ತಜ್ಞ ಅಶೋಕ್ ಕುಮಾರ್ ಶೆಟ್ಟಿಯವರ ‘ಅಶೋ..’ ಕವನ ಸಂಕಲನ ಬಿಡುಗಡೆ ಸಮಾರಂಭವು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಸಮಕಾಲಿನ ಜಗತ್ತಿನ ಅನೇಕ ವಿಷಯಗಳನು ಕವನ ರೂಪದಲ್ಲಿ ಸಮಾಜವನ್ನು ಮುಟ್ಟುವ ಪ್ರಾಮಾಣಿಕ ಪ್ರಯತ್ನವನ್ನು ಕೃತಿಕಾರರು ಈ ಕವನ ಸಂಕಲನದ ಮೂಲಕ ಮಾಡಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಡಾ.ಅರುಣಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News