ಲುಕ್ಮಾನ್ ಸ್ಟೀಲ್ ಮಾಲಕ ಕೆ. ಅಬ್ದುಲ್ ಸಮದ್ ನಿಧನ
ಬಂಟ್ವಾಳ : ಹೆಸರಾಂತ ಉದ್ಯಮಿ, ಬಿ.ಸಿ.ರೋಡ್ ಕೈಕಂಬದಲ್ಲಿರುವ ಲುಕ್ಮಾನ್ ಸ್ಟೀಲ್ ಸೆಂಟರ್ ಮಾಲಕರಾದ ಕೈಕಂಬ ನಿವಾಸಿ ಕೆ. ಅಬ್ದುಲ್ ಸಮದ್ (68) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.
ಮೃತರು ಪತ್ನಿ, ಬಂಟ್ವಾಳ ಪುರಸಭಾ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಕೈಕಂಬ ಹಾಗೂ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷೆ ಯಾಸ್ಮೀನ್ ಸಹಿತ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಮಿತ್ತಬೈಲ್ ಎಂ.ಜೆ.ಎಂ. ಅಧ್ಯಕ್ಷ ಅಬ್ದುಲ್ ಹಮೀದ್, ಎಸ್.ಎಂ. ಮುಹಮ್ಮದ್ ಅಲಿ ಶಾಂತಿಅಂಗಡಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.