ವಶಿಷ್ಟ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2020-02-17 16:55 GMT

ಹಿರಿಯಡ್ಕ, ಫೆ.17: ಮುಂಬೈಯ ಮಾಯಾ ಬಾರ್‌ನ ಮಾಲಕ ವಶಿಷ್ಠ ಸತ್ಯನಾರಾಯಣ ಯಾದವ್ (45) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಫೆ.11ರಂದು ಬಂಧಿಸಲ್ಪಟ್ಟ ಆರೋಪಿಗಳಾದ ಸುಮಿತ್ ಮಿಶ್ರ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೇರ, ಮೊಹಮ್ಮದ್ ಶರೀಫ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಫೆ.15 ರಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈ ನಾಲ್ವರಿಗೆ ಫೆ.27  ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಫೆ.13ರಂದು ಬಂಧಿಸಲ್ಪಟ್ಟ ಕೊಲೆಗೆ ಸಂಚು ರೂಪಿಸಿದ ಆರೋಪಿ ಸೈಫ್ ಆಲಿಯಾಸ್ ಸೈಫುದ್ದೀನ್ ಆತ್ರಾಡಿ ಕೂಡ ಫೆ.27ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News