ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಆಯ್ಕೆ

Update: 2020-02-18 10:34 GMT
ಮುಹಮ್ಮದ್ ಹನೀಫ್, ಅಬೂಬಕ್ಕರ್

ವಿಟ್ಲ :  ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಆಯ್ಕೆಯಾಗಿದ್ದಾರೆ.

ಸೋಮವಾರ ಬಿ.ಸಿ.ರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ  ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್  ಇದರ ಉಪಾಧ್ಯಕ್ಷ ಎಂ.ಎಸ್. ಮುಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ವಿಶೇಷ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಉಪಾಧ್ಯಕ್ಷರುಗಳಾಗಿ ಎಂ.ಎಸ್. ಮುಹಮ್ಮದ್. ಬಿ.ಎಂ.ಅಬ್ಬಾಸ್ ಆಲಿ, ಮಹಮ್ಮದ್ ಶಫಿ ಸಜಿಪ, ಮತ್ತು ಬಾವಾ ಫರಂಗಿಪೇಟೆ  ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ನೋಟರಿ ಅಬೂಬಕರ್  ವಿಟ್ಲ, ಜೊತೆ ಕಾರ್ಯದರ್ಶಿಯಾಗಿ ಖಲೀಲುಲ್ಲಾ ಬಂಟ್ವಾಳ, ಯೂಸುಫ್ ಕರಂದಾಡಿ, ಕೋಶಾಧಿಕಾರಿಯಾಗಿ ಹಾಜಿ ಪಿ.ಎಸ್. ಅಬ್ದುಲ್ ಹಮೀದ್ ನೆಹರುನಗರ, ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ಎಸ್. ಮುಹಮ್ಮದ್ ಕಡೇಶಿವಾಲಯ, ಶೇಕ್ ರಹ್ಮತುಲ್ಲಾ ಹಾಗೂ ಪತ್ರಿಕಾ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ನೇರಳಕಟ್ಟೆ ಅವರು ಅವಿರೋಧವಾಗಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ರಶೀದ್ ವಿಟ್ಲ,  ಸುಲೈಮಾನ್ ಹಾಜಿ ಕಲ್ಲಡ್ಕ, ಅಬ್ದುಲ್ ರಝಾಕ್ ಪಜೀರು, ಸುಲೈಮಾನ್ ಹಾಜಿ ಸಿಂಗಾರಿ, ರಫಿಕ್ ಹಾಜಿ ಸುರಿಬೈಲು, ಅಸಿಫ್ ಇಕ್ಬಾಲ್ ಫರಂಗಿಪೇಟೆ, ರಫೀಕ್ ಹಾಜಿ ಆಲಡ್ಕ, ಎಸ್.ಕೆ.ಕಾದರ್ ಹಾಜಿ ಮುಡಿಪು,  ಬಿ.ಎ.ಮುಹಮ್ಮದ್ ಬಂಟ್ವಾಳ, ಹಕೀಮ್ ಪರ್ತಿಪಾಡಿ, ಅಬ್ದುಲ್ ರಹಿಮಾನ್ ಹಾಜಿ ಕೇಪು, ಕೆ.ಕೆ.ಸುಲೈಮಾನ್ ಫೈಝಿ ಕಣಿಯೂರು ಹಾಗೂ 
ಅಶ್ರಫ್ ಮೂಲರಪಟ್ನ ಇವರನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News