ಪ.ಜಾತಿ-ಪಂಗಡಗಳ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ
Update: 2020-02-18 14:43 GMT
ಉಡುಪಿ, ಫೆ.18: ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲು ಉದ್ದೇಶಿಸಿರುವ ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಇವರ ಆಶ್ರಯದಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿ ಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಬೇತಿ ತರಗತಿಗಳನ್ನು ಮಾರ್ಚ್ ತಿಂಗಳಿನಲ್ಲಿ ನಡೆಸಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ ಅ್ಯರ್ಥಿಗಳು ಫೆಬ್ರವರಿ ತಿಂಗಳಿನಲ್ಲಿ ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಲು ಸೂಚಿಸಲಾಗಿದೆ.
ತರಬೇತಿ ಉಚಿತವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರಜತಾದ್ರಿ, ಮಣಿಪಾಲ, ದೂ.ಸಂಖ್ಯೆ: 0820 2574869, 9480259790ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.