ವಿದ್ಯಾರ್ಥಿನಿ ಕೊಲೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ತಿರಸ್ಕೃತ

Update: 2020-02-18 16:00 GMT

ಕುಂದಾಪುರ, ಫೆ.18: ಬೈಂದೂರು ಒತ್ತಿನೆಣೆ ಬಳಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಕೊಲೆ ಪ್ರಕರಣದ ಆರೋಪಿ ಸುನೀಲ್ ಯಾನೆ ಕೆಪ್ಪೆ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ವಿಶೇಷ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ.

ಬೈಂದೂರು ಯೋಜನಾ ನಗರದ ನಿವಾಸಿ ಸುನೀಲ್ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನರಹರಿ ಪ್ರಭಾಕರ್ ವುರಾಠೆ ಅರ್ಜಿಯನ್ನು ವಜಾಗೊಳಿಸಿದರು.

2015ರ ಜೂ.17ರಂದು ಬೈಂದೂರು ಸರಕಾರಿ ಕಾಲೇಜಿನಿಂದ ನಡೆದು ಕೊಂಡು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಆರೋಪಿ, ಕೊಲೆ ಮಾಡಿದ್ದನು. ಈ ಪ್ರಕರಣದಲ್ಲಿ ಆರೋಪಿ ಕಳೆದ ಐದು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು ಇನ್ನೊಬ್ಬ ಜಾಮೀನು ಪಡೆದು ಹೊರಗಡೆ ಇದ್ದಾನೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News