ಭಟ್ಕಳ : ಫೆ. 20ರಂದು ಅಂಜುಮನ್ ಕಾಲೇಜಿನಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

Update: 2020-02-18 17:18 GMT

ಭಟ್ಕಳ : ಅಂಜುಮನ್ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಫೆ.20ರಂದು ಸ್ಥಳೀಯ  ಅಂತರ್ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ.

‘ಭಾರತದ ಆರ್ಥಿಕ ಕುಸಿತ : ಕಾರಣಗಳು ಮತ್ತು ಪರಿಹಾರೋಪಾಯಗಳು’ ಎಂಬ ವಿಷಯದ ಮೇಲೆ ನಡೆಯಲಿರುವ ಈ ವಿಚಾರಸಂಕಿರಣವು ಕಾಲೇಜಿನ ಸಭಾಭವನದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ. ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರಹೀಮ್ ಜುಕಾಕು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಚಾರ ಸಂಕಿರಣದಲ್ಲಿ ದೇಶ ವಿದೇಶದ ವಿಷಯ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News