ಪ್ರತ್ಯೇಕ ಪ್ರಕರಣ: ಇಬ್ಬರು ಯುವಕರು ಆತ್ಮಹತ್ಯೆ

Update: 2020-02-18 17:23 GMT

ಬೆಂಗಳೂರು, ಫೆ.18: ಇಲ್ಲಿನ ಬಸವನಪುರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ನೇಣಿಗೆ ಶರಣಾದರೆ, ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಬಸವನಪುರದ ಸೂರಿ (22) ಆತ್ಮಹತ್ಯೆಗೆ ಶರಣಾದ ಯುವಕ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸೂರಿ, ಮಾನಸಿಕ ಖಿನ್ನತೆಗೊಳಗಾಗಿದ್ದು, ಸೋಮವಾರ ರಾತ್ರಿ 11ರ ವೇಳೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್‌ಪುರಂ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಯುವಕ ನೇಣು: ಜೀವನದಲ್ಲಿನ ಜಿಗುಪ್ಸೆಯಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್‌ಟಿ ನಗರದ ಯಾಗಪ್ಪ ಲೇಔಟ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಯಾಗಪ್ಪ ಲೇಔಟ್‌ನ ಧರಣಿ(30) ಮೃತಪಟ್ಟವರು ಎನ್ನಲಾಗಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಹೆಬ್ಬಾಳ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News