ದಲಿತ ವ್ಯಕ್ತಿಗೆ ಹಲ್ಲೆ ಪ್ರಕರಣ: 7 ಆರೋಪಿಗಳ ಬಂಧನ

Update: 2020-02-20 14:38 GMT
ಸಾಂದರ್ಭಿಕ ಚಿತ್ರ

ಚೆನ್ನೈ, ಫೆ.20: ಗ್ರಾಮದ ರಸ್ತೆ ಬದಿಯಲ್ಲಿ ಮಲ ವಿಸರ್ಜಿಸಿದ ಆರೋಪದಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ 7 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

 ಹಲ್ಲೆ ಘಟನೆ ಕೆಲ ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಬುಧವಾರ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಮೂವರು ಮಹಿಳೆಯರು. ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ದಲಿತ ಯುವಕ ಆರ್ ಶಕ್ತಿವೇಲು ಎಂಬಾತ ರಸ್ತೆ ಬದಿಯಲ್ಲಿ ಮಲ ವಿಸರ್ಜನೆ ಮಾಡಿದ್ದ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಆತನಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News