ಫೆ.23ರಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಕಳಕ್ಕೆ

Update: 2020-02-20 14:55 GMT

ಉಡುಪಿ, ಫೆ.20: ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೆ.23ರ ರವಿವಾರ ಜಿಲ್ಲೆಯ ಕಾರ್ಕಳಕ್ಕೆ ಭೇಟಿ ನೀಡಿ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಆಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರವಿವಾರ ಸಂಜೆ 4 ಗಂಟೆಗೆ ಕಾರ್ಕಳ ಸ್ವರಾಜ್ ಮೈದಾನ ಹೆಲಿಪ್ಯಾಡ್‌ಗೆ ಆಗಮಿಸುವ ಮುಖ್ಯಮಂತ್ರಿಗಳು, 4:30ಕ್ಕೆ ಕಾರ್ಕಳದ ಎಸ್‌ವಿಟಿ ಶಾಲಾ ವಠಾರದಲ್ಲಿ ನಡೆಯುವ 2019ನೇ ಸಾಲಿನ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ನಂತರ ಶಿವಮೊಗ್ಗಕ್ಕೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News