ಮಾ.2ರಂದು ಮುಖ್ಯಮಂತ್ರಿ ಉತ್ತರ: ಸ್ಪೀಕರ್ ಕಾಗೇರಿ

Update: 2020-02-20 16:10 GMT

ಬೆಂಗಳೂರು, ಫೆ.20: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ‌ ವಿಧಾನಸಭೆಯಲ್ಲಿ ನಡೆದಿರುವ ಚರ್ಚೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮಾ.2ರಂದು ಉತ್ತರ ನೀಡಲಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಗುರುವಾರ ವಿಧಾನಸಭೆಯಲ್ಲಿ ಈ ವಿಷಯವನ್ನು ಸದನದ ಗಮನಕ್ಕೆ ತಂದರು. ಅಲ್ಲದೇ, ಮಾ.3 ಹಾಗೂ 4ರಂದು ವಿಧಾನಸಭೆಯಲ್ಲಿ ಸಂವಿಧಾನದ ಕುರಿತು ವಿಶೇಷ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News