ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ

Update: 2020-02-20 16:21 GMT

ಮಂಡ್ಯ, ಫೆ.20: ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಯೋಧ ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದೆ.

ಗುರು ಅವರ ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರಿಗೆ ಸೂಚಿಸಿದ್ದಾರೆ.

ಮದ್ದೂರು ತಾಲೂಕು ಗುಡಿಗೆರೆ ಗ್ರಾಮದ ಗುರು ಅವರು ಕಳೆದ ವರ್ಷ ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದು, ಗ್ರಾಮದ ಬಳಿ ಸಮಾಧಿ ಬಳಿ ಸ್ಮಾರಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

ಸೈನಿಕನ ಸಮಾಧಿ ಬಳಿ ಸ್ಮಾರಕ ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟೇಶ್ ಅನುದಾನ ಕೋರಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News