ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್

Update: 2020-02-21 15:43 GMT

ಬೆಂಗಳೂರು, ಫೆ. 21: ಎರಡು ದಿನದ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಶ್ರೀಮತಿ ಅವರೊಂದಿಗೆ ಇಂದು ರಾತ್ರಿ 7.15 ಕ್ಕೆ ಭಾರತೀಯ ವಾಯು ಸೇನಾ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

ಅವರನ್ನು ರಾಜ್ಯಪಾಲರಾದ ವಜುಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎಸ್. ಅಶ್ವಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಡಿ.ಜಿ. ಮತ್ತು ಐಜಿಪಿ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ಸಂಜೆ 6.45ರಿಂದ ಆಗಸದಲ್ಲಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮಾರ್ಗವಾಗಿ ಬಾವಲಿ ಹಕ್ಕಿಗಳು ಗುಂಪು ಗುಂಪಾಗಿ ಸಾಗುತ್ತಿದ್ದ ಕಾರಣ ರಾಷ್ಟ್ರಪತಿ ಅವರು ಇದ್ದ ವಿಮಾನವನ್ನು ಸುರಕ್ಷಿತವಾಗಿ 10 ನಿಮಿಷ ತಡವಾಗಿ ಇಳಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News