ಜಮೀನು ವಿವಾದ ಜಗಳ: ಯುವಕ ಆತ್ಮಹತ್ಯೆಗೆ ಯತ್ನ

Update: 2020-02-21 17:37 GMT

ಪಾಂಡವಪುರ, ಫೆ.21: ಜಮೀನು ಮಾರಾಟ ವಿಷಯವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ನಡೆದ ಜಗಳ ಸಂಬಂಧ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಬಲರಾಮು ಅಲಿಯಾಸ್ ಸಂತೋಷ್(24) ಆತ್ಮಹತ್ಯೆಗೆ ಯತ್ನಿಸಿದವ. ಜಮೀನು ಬಳಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಈತನನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಜಮೀನು ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಒಂದು ಗುಂಪು ಬಲರಾಮು ಇದ್ದ ಗುಂಪಿನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಒಡ್ಡಿದರು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ಬಲರಾಮು ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಪೋಷಕರು ಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News